6th kannada notes

 ಪದ್ಯ ಭಾಗ-6

ಪದ್ಯದ ಹೆಸರು : ಗಂಗವ್ವ ತಾಯಿ



ಅ . ಬಿಟಸ್ಥಳವನ್ನು ಕೆಳಗೆ ನೀಡಲಾದ ಸೂಕ್ತ ಪದಗಳಿಂದ ಭರ್ತಿಮಾಡಿರಿ . 

  1. ಬಾರವ್ವ ತಾಯಿ ಗಂಗವ್ವ ತಾಯಿ . 
  2. ಹೊಳೆಯವ್ವ ತಾಯಿ ನೀರವ್ವ ತಾಯಿ . 
  3. ಮೈಮನಸ ಹೊಲಸೆಲ್ಲ ತೊಳೆಯನ್ನ ತಾಯಿ , 
  4. ನೀರವ್ವ ಗಂಗವ್ವ ಮಳೆಯಾಗಿ ಬಾರವ್ವ
  5. ಒಣಗೀದ ನೆಲದಾಗ ಹಸುರಾಗಿ ಹೊಳೆಯವ್ವ ,   

ಆ . ಸಮಾನಾರ್ಥಕ ಪದಗಳನ್ನು ಬರೆಯಿರಿ . 

  1. ನೀರು : ಜಲ , ಗಂಗೆ 
  2. ನಭ : ಆಕಾಶ , ಆಗಸ , ಬಾನು 
  3. ಕುಣಿ : ಹೊಂಡ 
  4. ತಾಯಿ : ಅಮ್ಮ ಅವ್ವ . ಮಾತೆ 

ಇ . ಒಂದು ವಾಕ್ಯದಲ್ಲಿ ಉತ್ತರಿಸಿರಿ . 

1. ನೀರು ಎಲ್ಲೆಲ್ಲಿ ತುಂಬಬೇಕು ಎಂದು ಕವಿ ಹೇಳುತ್ತಾರೆ ? 

ಉತ್ತರ : ನೀರು ನೆಲದ ಕಣ ಕಣದಾಗ ಹಾಗೂ ಮನದ ಪದಪದರಾಗದಾಗ ತುಂಬಬೇಕು ಎಂದು ಕವಿ ಹೇಳುತ್ತಾರೆ . 

2. ನೀರು ಹೇಗೆಲ್ಲ ಹರಿದು ಬರಬೇಕೆಂದು ಕವಿ ವಿನಂತಿಸಿಕೊಂಡಿದ್ದಾರೆ ?

 ಉತ್ತರ : ನೀರು ನೆಲದ ಒಳ ಹೊರಹೆಲ್ಲ , ಪಾಣದ ತುಂಬೆಲ್ಲಾ ನಗುನಗುತ , ನಲಿಯುತ , ಪುಟಿಯುತ್ತ , ಕುಣಿಯುತ್ತ , ಚಿಮ್ಮುತ್ತಾ , ಜಿಗುಯುತ್ತಾ , ಹರಿಯುತ್ತಾ , ಸುರುಯುತ್ತಾ ಹರಿದು ಬರಬೇಕೆಂದು ಕವಿ ವಿನಂತಿಸಿಕೊಂಡಿದ್ದಾರೆ . 

3. ಒಣಗಿದ ನೆಲದಲ್ಲಿ ನೀರು ಹೇಗೆ ಹೊಳೆಯಬೇಕು ಎಂದು ಕವಿ ಹೇಳುತ್ತಾರೆ ? 

ಉತ್ತರ : ಒಣಗಿದ ನೆಲದಲ್ಲಿ ಹಸುರಾಗಿ ಹೊಳೆಯಬೇಕು ಎಂದು ಕವಿ ಹೇಳುತ್ತಾರೆ . 

4. ಈ ಕವನವನ್ನು ಬರೆದವರು ಯಾರು ? 

ಉತ್ತರ : ಈ ಕವನವನ್ನು ಬರೆದವರು ಡಾ || ಸಿದ್ದಲಿಂಗ ಪಟ್ಟಣಶೆಟ್ಟಿಯವರು . 

ಈ . ಕೊಟ್ಟಿರುವ ಮಾತನ್ನು ಯಾರು ಯಾರಿಗೆ ಯಾವಾಗ ಹೇಳಿದರು ? 

1. ನೆಲದ ಕಣಕಣದಾಗ ಮನದ ಪದಪದರಾಗ , 

ಉತ್ತರ : ಮಳೆ ಬಾರದೆ ಇದ್ದಾಗ ರೈತರು ಗಂಗವ್ವನನ್ನು ಕವಿಯ ಮೂಲಕ ಕರೆದಿದ್ದಾರೆ . 

2. ಹರಿಯುತ್ತ ಸುರಿಯುತ್ತ ಧೋಧೋ ಬಾರವ್ವ 

ಉತರ : ಜನತೆ ಗಂಗವ್ವನನ್ನು ಮಳೆಯಾಗಿ ಸುರಿಯುವಂತೆ ಹೇಳಿರುವುದನ್ನು ಕವಿ ಕವಿತೆಯ ಮೂಲಕ ಕರೆದಿದ್ದಾರೆ. 

3. ಒಣಗೀದ ನೆಲದಾಗ ಹಸಿರುಸಿರು ಉಳಿಸಾಕ

ಉತ್ತರ : ಗಂಗವ್ವ ಮಳೆಯಾಗಿ ಏಕೆ ಸುರಿಯಬೇಕೆನ್ನುವ ಪ್ರಶ್ನೆಗೆ ಉತ್ತರವಾಗಿ ಕಎ ಗಂಗವ್ವ ಒಣಗಿರುವ ನೆಲಕ್ಕೆ ಹಸಿರು ಬೆಳೆಯುವಂತೆ ಮಾಡಲು ಬರಬೇಕೆಂದು ರೈತರ ಪ್ರತಿನಿಧಿಯಾಗಿ ಕವಿ ಗಂಗವ್ವನನ್ನು ಕರೆಯುತ್ತಿದ್ದಾರೆ . 

4. ಜೀವದಾ ತುಣಕಾಗಿ ಮೈಮನಸ ಹೊಲಸೆಲ್ಲ . 

ಉತ್ತರ : ಜೀವನದಲ್ಲಿ ಉಂಟಾಗಿರುವ ಎಲ್ಲಾ ರೀತಿಯ ಮೈ ಮನಸ್ಸಿನ ಕೊಳೆಯೆಲ್ಲ ತೆಗೆಯಲು ಗಂಗವ್ವ ಧರೆಗೆ ಇಳಿದು ಬಾ ಎಂದು ಕಏ ಗಂಗವ್ವನಿಗೆ ಕರೆದಿದ್ದಾರೆ . 

ಈ . ಎರಡು – ಮೂರು ವಾಕ್ಯದಲ್ಲಿ ಉತ್ತರಿಸಿರಿ . 

1. ಗಂಗವ್ವ ಇದ್ದರೆ ಎಲ್ಲೆಲ್ಲಿ , ಏನೇನು ಆಗುವುದೆಂದು ಕವಿ ಹೇಳಿದ್ದಾರೆ ? 

ಉತ್ತರ : ಗಂಗವ್ವ ಇದ್ದರೆ ಒಣಗಿದ ನೆಲದಲ್ಲಿ ಹಸಿರು ಅಲಂಕರಿಸುವುದು , ಹಸಿರು ಹಸಿರಾಗಿ ಬೆಳೆದು ಎಲ್ಲರ ಉಸಿರು ಉಳಿಸುವುದು , ಗಂಗವ್ವ ಬಂದರೆ ಜನರ ಮೈ ಮನಸ್ಸಿನ ಕೊಳೆಯೆಲ್ಲಾ ತೊಳೆಯಲ್ಪಟ್ಟು ಅವರು ಪರಿಶುದ್ಧರಾಗುವರು . ನದಿಯಾಗಿ ಹರಿದಾಗ ಹನಿ ಹನಿ ಕಣ ಕಣವೆಲ್ಲಾ ಜಗಿಸಿ ಎಲ್ಲೆಲ್ಲೂ ಸಂತೋಷ , ನಗು ನಲಿವು ಕಂಡುಬರುತ್ತದೆ . 

2. ನೀರು ಯಾವ ಯಾವ ಕೆಲಸಕ್ಕೆ ಬೇಕು ಎಂದು ಕವಿ ಹೇಳಿದ್ದಾರೆ ? 

ಉತ್ತರ : ನೀರು ಜನರ ಉಪಯೋಗಕ್ಕೆ ಪ್ರಾಣವಾಯುವಿನಷ್ಟೆ ಅಗತ್ಯವಾಗಿ ಮನುಷ್ಯನಿಗೆ ಕುಡಿಯಲು ಬೇಕು , ಮಳೆಯಾಗಿ ಸುರಿದರೆ ಮಾತ್ರ ನೆಲ ಹಸಿರಾಗುತ್ತದೆ . ಹಸಿರು ನೆಡಲು ಸಾಧ್ಯವಾಗುತ್ತದೆ . ಹಸಿರು ಎಲ್ಲರಿಗೂ ಬೇಕಾದ ಆಹಾರ ಕೊಟ್ಟು ಜೀವಿಗಳ ಉಸಿರನ್ನು ಉಳಿಸುತ್ತದೆ ನೀರು ಇಲ್ಲದೆ ಜನರ ಮೈಗಳು ಕೊಳಕಾಗಿದ್ದರೆ , ಅದನ್ನು ಸ್ವಚ್ಛಗೊಳಿಸಲು ನೀರು ಅಗತ್ಯವಾಗಿ ಬೇಕು , ನೀರು ಇಲ್ಲದೆ ಬರಗಾಲ ಬಂದಲ್ಲಿ ಜನರು ಮನಸ್ಸು ತೊಡಗಿಸುತ್ತಾರೆ . ಅದರ ಬದಲು ಎಲ್ಲರಿಗೂ ತೃಪ್ತಿಯಾಗಿ ಊಟ – ಬಟ್ಟೆ ಸಿಕ್ಕಲ್ಲಿ ಅವರ ಮನಸ್ಸು ಇಂಥಹ ಕೆಲಸಗಳಿಗೆ ಎಡೆ ಮಾಡುವುದಿಲ್ಲ , ಹೀಗೆ ಜನಕ್ಕೆ ಎಲ್ಲರಿಗೂ ಕವಿ ಹೇಳಿದಾಗ ನೀರು ಬೇಕು ಎಂದು . 

ಊ . ಕೊಟ್ಟಿರುವ ಪದ್ಯದಲ್ಲಿ ಪ್ರಾಸಪದಗಳನ್ನು ಗುರುತಿಸಿ ಬರೆಯಿರಿ , 

ಬೆಳ್ಳಾನ ಎರಡೆತ್ತು ಬೆಳ್ಳಿಯ ಬಾರುಕೋಲು 

ಹಳ್ಳಾದ ಮಾಗಿ ಹೊಡೆದಾವು | ಎತ್ತಿನ 

ತೆಜ್ಞಾನ ಹೊಟ್ಟಿ ಹಸಿದಾವು . 

ಮೊದಲು . ಎರಡನೇ ಹಾಗೂ ಮೂರನೇ ಸಾಲಿನ ಎರಡನೇ ಅಕ್ಷರ ‘ ಳ್ಳಾ ‘ ಪುನರಾವರ್ತನೆ ಆಗಿರುವುದರಿಂದ ಇದು ‘ ಆದಿ ಪ್ರಾಸ ‘ ಇದೆ .

No comments: